ಪೂಜೆಯಲ್ಲಿ ಕರ್ಪೂರ ಆರತಿ ಮಾಡುವುದರ ಹಿಂದಿರುವ ವೈಜ್ಞಾನಿಕ ಕಾರಣವೇನೆಂದು ನಿಮಗೆ ಗೊತ್ತೇ?
ಹಿಂದೂ ಸಂಪ್ರದಾಯದಲ್ಲಿ ಅನೇಕ ಆಚರಣೆಗಳಿರುವ ವಿಷಯ ಎಲ್ಲರಿಗೂ ಗೊತ್ತು.ಅನಾದಿ ಕಾಲದಿಂದಲೂ ಹಿಂದೂಗಳು ಈ ಆಚರಣೆಗಳನ್ನು ತಪ್ಪದೇ ಪಾಲಿಸಿಕೊಂಡು ಬರುತ್ತಿದ್ದಾರೆ.ಮುಖ್ಯವಾಗಿ ದೇವರ ಪೂಜೆ ಮಾಡುವಾಗ ದೀಪ,ಅಗರ ಬತ್ತಿ ಬೆಳಗುವುದು ಕರ್ಪೂರ ಹಾರತಿ ಮಾಡುತ್ತೇವೆ.ಇವೆಲ್ಲದರ ಹಿಂದೆ ವೈಜ್ಙಾನಿಕ ಕಾರಣಗಳಿವೆಯೆಂಬುದನ್ನು ತಿಳಿದುಕೊಂಡಿದ್ದೇವೆ.ಕರ್ಪೂರ ಹಾರತಿ ಮಾಡುವುದಲ್ಲಿ ಅಡಗಿರುವ ವೈಜ್ಞಾನಿಕ ಕಾರಣಗಳೇನು,ಹಾಗೂ ಅದರಿಂದ ನಮಗಾಗುವ ಪ್ರಯೋಜನಗಳೇನು ಎಂಬುದರ ಬಗ್ಗೆ ವಿವರವಾಗಿ ತಿಳಿದುಕೊಳ್ಳೋಣ.
ಸಿನಮೋಮಮ್ ಕ್ಯಾಂಫೋರ( Cinnamomum Camphora) ಎಂಬ ವೃಕ್ಷದಿಂದ ಕರ್ಪೂರವನ್ನು ತಯಾರಿಸುತ್ತಾರೆ.ಆದರೆ,ಇದನ್ನು ಹೆಚ್ಚಾಗಿ ಹಿಂದೂಗಳು ಪೂಜಾ ಕಾರ್ಯಗಳಲ್ಲಿ ಉಪಯೋಗಿಸುತ್ತಾರೆ.ಪೂಜಾ ಸಮಯದಲ್ಲಿ ಕರ್ಪೂರವನ್ನು ಹಾರತಿಯ ರೂಪದಲ್ಲಿ ದೇವರಿಗೆ ಬೆಳಗುವ ಸಮಯದಲ್ಲಿ ಬರುವ ಹೊಗೆ ದೇಹದ ಆರೋಗ್ಯದ ಮೇಲೆ ಸತ್ಪರಿಣಾಮಗಲನ್ನು ಉಂಟುಮಾಡುತ್ತದೆ.
ಕರ್ಪೂರದಿಂದ ಬರುವ ಹೊಗೆಯಿಂದ ಅಸ್ತಮಾ,ಟೈಪಾಯಿಡ್, ಮನಸ್ಸಿನ ದುಗುಡ,ಬೆಚ್ಚಿ ಬೀಳುವಿಕೆ,ಹಿಸ್ಟೀರಿಯಾ,ಕೀಲುಗಳನೋವು ಮೊದಲಾದ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು.
ಈ ಹೊಗೆಯಿಂದ ವಾತಾವರಣದಲ್ಲಿರುವ ಬ್ಯಾಕ್ಟೀರಿಯ,ಸಣ್ಣ ಕ್ರಿಮಿಗಳು,ವೈರಸ್ ಗಳು ನಾಶವಾಗುತ್ತವಂತೆ.ಜ್ಞಾಪಕ ಶಕ್ತಿ ವೃದ್ಧಿಸುತ್ತದೆ,ಚರ್ಮದ ಕಾಯಿಲೆಗಳು ಗುಣವಾಗುತ್ತವೆ.
ಕರ್ಪೂರದ ವಾಸನೆ ಕೆಲವರಿಗೆ ಇಷ್ಟವಾಗುವುದಿಲ್ಲ.ಆದರೆ,ಕರ್ಪೂರದ ವಾಸನೆಯನ್ನು ಸ್ವರ್ಗ ಸುಖಕ್ಕೆ ಹೋಲಿಸುತ್ತಾರೆ.ಇದನ್ನು ಉರಿಸುವುದರಿಂದ ಬೂದಿಉಳಿಯದೆ ಸಂಪೂರ್ಣವಾಗಿ ಉರಿದು ಹೋಗುತ್ತದೆ.ಆದುದರಿಂದ ದೇವರ ಪೂಜೆಯಲ್ಲಿ ಉಪಯೋಗಿಸುತ್ತಾರಂತೆ.
ಕರ್ಪೂರವನ್ನು ಉರಿಸಿದರೆ ಹೇಗೆ ಸಂಪೂರ್ಣವಾಗಿ ಉರಿದು ಹೋಗುತ್ತದೆಯೋ ಅದೇ ರೀತಿ ಅದರ ಎದುರಿಗೆ ನಿಂತಿರುವವರ ಅಹಂಕಾರವೂ ಉರಿದು ಹೋಗಿ ಪರಿಶುದ್ಧರಾಗುತ್ತಾರಂತೆ.
ಕರ್ಪೂರವನ್ನು ಉರಿಸುವುದರಿಂದ ವಾತಾವರಣದಲ್ಲಿ ಧನಾತ್ಮಕ ಶಕ್ತಿ ಏರ್ಪಟ್ಟು ಆ ಶಕ್ತಿ ನಮ್ಮಲ್ಲಿಪ್ರವೇಶಿಸಿ ನಮಗೆ ಒಳ್ಳೆಯದನ್ನುಂಟುಮಾಡುತ್ತದಂತೆ.
(ಸಂಗ್ರಹ #ಚನ್ನೇಶಶಾಸ್ತ್ರಿಗಳು)
No comments:
Post a Comment
If you have any doubts. please let me know...