ಶುಭ ಸಮಾರಂಭಗಳಲ್ಲಿ, ಹಬ್ಬ, ಪೂಜೆ ವ್ರತಗಳನ್ನು ಆಚರಿಸಿದವರು ತಾಂಬೂಲ ನೀಡುವ ಆಚರಣೆ ಇದೆ. ಹೀಗೆ ತಾಂಬೂಲ ನೀಡುವಾಗ ಮೊದಲು ಮುತ್ತೈದೆಯರಿಗೆ ಅರಿಶಿನ, ಕುಂಕುಮ ನೀಡಬೇಕು. ನಂತರ ತಾಂಬೂಲ ನೀಡುವಾಗ ವೀಳ್ಯದೆಲೆಯ ತೊಟ್ಟು ಹಾಗೂ ಬಾಳೆಹಣ್ಣಿನ ತೊಟ್ಟು ನಮ್ಮ ಕಡೆಯಲ್ಲಿರಬೇಕು.
ವೀಳ್ಯೆದೆಲೆಯನ್ನು ಎರಡು ಅಥವಾ ಐದರ ಸಂಖ್ಯೆಯಲ್ಲಿ ಹಾಗೆಯೇ ಅಡಿಕೆಯನ್ನು, ಹಣ್ಣನ್ನು ಎರಡರ ಸಂಖ್ಯೆಯಲ್ಲಿಡಬೇಕು. ತಾಂಬೂಲದಲ್ಲಿ ಯಾವುದಾದರೂ ಒಂದು ಹಣ್ಣನ್ನು ನೀಡಬೇಕು. ಇನ್ನು ದೇವರಿಗೆ ನೈವೇದ್ಯ ಅರ್ಪಿಸುವಾಗ ಪೂರ್ವ ಅಥವಾ ಉತ್ತರ ದಿಕ್ಕಿಗೆ ತುದಿ ಬರುವ ತರಹ ವೀಳ್ಯದೆಲೆಯನ್ನು ಇಟ್ಟು ದೇವರಿಗೆ ನೈವೇದ್ಯ ಅರ್ಪಿಸಬೇಕು.
ಯಾರ ಮನೆಯಲ್ಲೇ ತಾಂಬೂಲ ಕೊಟ್ಟರೂ, ದೇವರ ಮುಂದೆ ಇಟ್ಟು ನಮಸ್ಕಾರ ಮಾಡಿ, ಆ ನಂತರ ಉಪಯೋಗಿಸಬೇಕು. ಮಂಗಳವಾರ, ಶುಕ್ರವಾರಗಳಂದು ಯಾವುದೇ ಕಾರಣಕ್ಕೂ ವೀಳ್ಯದೆಲೆಯನ್ನು ಹೊರಗೆ ಬಿಸಾಕಬಾರದು. ಹಸಿರಾಗಿರುವ ಮತ್ತು ಅಂದವಾಗಿ ಹಸ್ತದ ಆಕಾರ ಇರುವ ಎಳೆಯ ವೀಳ್ಯದೆಲೆಯನ್ನೇ ದೇವರ ನೈವೇದ್ಯಕ್ಕೆ ಮತ್ತು ತಾಂಬೂಲ ನೀಡಲು ಬಳಸಬೇಕು
1. ವೀಳ್ಯದೆಲೆ ತಾಂಬೂಲ ಕೊಡುವಾಗ, ವೀಳ್ಯದೆಲೆ ಆಗಿ ಹೋಗಿದೆ, ಏನು ಅಂದುಕೊಳ್ಳಬೇಡಿ ಅಂಥ ಬರೀ ಹಣ್ಣು ಅಥವಾ ತೆಂಗಿನಕಾಯಿ ಕೊಟ್ಟರೆ, ನೀವು ಮಾಡುವ ಕಾರ್ಯಗಳಿಗೆ ತುಂಬಾ ಅಡಚಣೆ ಉಂಟಾಗುತ್ತದೆ. ಶುಭಕಾರ್ಯಗಳಾದರೆ ತುಂಬಾ ತೊಂದರೆಗಳಾಗುತ್ತವೆ, ಜನಸಹಾಯ ದೊರೆಯುವುದಿಲ್ಲ. ಹಣಕಾಸಿಗೆ ಪರಾದಾಟವಾಗುತ್ತದೆ.
2. ನೀವು ಕೊಡುವ ತಾಂಬೂಲದ ವೀಳ್ಯದೆಲೆ ಒಣಗಿದ್ದರೆ ಅತಿಯಾದ ನಷ್ಟ, ಅನಾರೋಗ್ಯವಾಗುತ್ತದೆ, ನಿಮ್ಮ ಕಾರ್ಯಗಳು ಅರ್ಧಕ್ಕೇ ನಿಂತು ಹೋಗುತ್ತವೆ.
3. ಯಾರಾದರೂ ಕೊಟ್ಟ ತಾಂಬೂಲವನ್ನು ದೇವರಿಗೆ ಸಮರ್ಪಿಸದೇ, ಯಾವುದೋ ಮೂಲೆಯಲ್ಲಿ ಇಟ್ಟುಬಿಟ್ಟರೆ, ಸಮಾಜದಲ್ಲಿ, ಬಂಧುಗಳಲ್ಲಿ ಗೌರವ ಕಳೆದುಕೊಳ್ಳುತ್ತಾರೆ, ಮಕ್ಕಳಿಗೆ ಮರೆವಿನ ರೋಗ ಬರುತ್ತದೆ.
4. ಯಾರಾದರೂ ತಾಂಬೂಲ ಕೊಟ್ಟಾಗ ಮನೆಗೆ ತರದೇ ಎಲ್ಲಿಯಾದರೂ ಬಿಟ್ಟು ಬಂದರೆ. ನಿಮ್ಮ ಕಾರ್ಯಗಳು ತುಂಬಾ ನಿಧಾನವಾಗುತ್ತದೆ, ವಿವಾಹ ಕಾರ್ಯಗಳಿಗೆ ಅಡಚಣೆಯಾಗುತ್ತದೆ, ಶುಭ ಕಾರ್ಯ ನಿಧಾನವಾಗುತ್ತದೆ. ಮಕ್ಕಳ ಮಾನಸಿಕ ಬೆಳವಣಿಕೆ ಕಡಿಮೆಯಾಗುತ್ತದೆ.
5. ತಾಂಬೂಲ ಕೆಳಗೆ ಬಿದ್ದರೆ ನಿಮ್ಮ ಕೆಲಸಗಳು ಇನ್ನೇನು ಆಯಿತು ಅನ್ನೋ ಸಮಯದಲ್ಲಿ ಅರ್ಧಕ್ಕೇ ನಿಂತುಹೋಗುತ್ತದೆ.
6. ತಾಂಬೂಲ ಕೊಡುವಾಗ ವೀಳ್ಯದೆಲೆ ಅಡಿಕೆ ಕೊಳೆತಿದ್ದರೆ, ದರಿದ್ರರಾಗುತ್ತೀರಿ, ಸಾಲದ ಸಮಸ್ಯೆ ಜಾಸ್ತಿಯಾಗುತ್ತದೆ. ಯಾರ ಮನೆಯಲ್ಲಿ ತಾಂಬೂಲ ಕೊಟ್ಟರೂ ಮೊದಲು ತಂದು ದೇವರ ಮುಂದೆ ಇಟ್ಟು ನಮಸ್ಕರಿಸಿ, ಆನಂತರ ಸರಿಯಾದ ರೀತಿಯಲ್ಲಿ ಉಪಯೋಗಿಸಿ.
ವಿವಿಧ ರೀತಿಯ ತಾಂಬೂಲಗಳು.. !
ತಾಂಬೂಲಗಳಲ್ಲಿ ಮೂರು ರೀತಿಯ ತಾಂಬೂಲಗಳಿವೆ..
೧. ಫಲ ತಾಂಬೂಲ..
೨. ಪೂರ್ಣಫಲ ತಾಂಬೂಲ..
೩. ಸಾಮೂಹಿಕ ತಾಂಬೂಲ..
" ಫಲ ತಾಂಬೂಲ" : ತಾಂಬೂಲದಲ್ಲಿ ಹಣ್ಣನ್ನು ಇಟ್ಟು ಕೊಡುವುದೇ ಫಲತಾಂಬೂಲ..
ಫಲ ತಾಂಬೂಲದಲ್ಲಿ ಎರಡು ವಿಧಗಳಿವೆ.
೧. ಫಲ ತಾಂಬೂಲ..
೨. ಪಂಚಫಲ ತಾಂಬೂಲ ..
೧. ಫಲ ತಾಂಬೂಲ :
ಎರಡು ವೀಳ್ಯದೆಲೆ
ಎರಡು ಅಡಿಕೆ
ಯಥಾಶಕ್ತಿ ದಕ್ಷಿಣೆ
ಒಂದೇ ಜಾತಿಯ ಹಣ್ಣು(ಎರಡು)
**
೨. ಪಂಚಫಲ ತಾಂಬೂಲ ::
ಐದು ವೀಳ್ಯದೆಲೆ
ಐದು ಅಡಿಕೆ
ಯಥಾ ಶಕ್ತಿ ದಕ್ಷಿಣೆ
ಐದು ಜಾತಿಯ ಹಣ್ಣುಗಳು..
(5-5 ಬೇಕಾದರೂ ಕೊಡಬಹುದು)
***
" ಪೂರ್ಣಫಲ ತಾಂಬೂಲ "..
ಎರಡು ವೀಳ್ಯದೆಲೆ
ಎರಡು ಅಡಿಕೆ
ಯಥಾಶಕ್ತಿ ದಕ್ಷಿಣೆ
ಒಂದು ಪೂರ್ಣಫಲ..
**
" ಸಾಮೂಹಿಕ ತಾಂಬೂಲ " :
ಎರಡು ವೀಳ್ಯದೆಲೆ
ಎರಡು ಅಡಿಕೆ
ಯಥಾಶಕ್ತಿ ದಕ್ಷಿಣೆ
ತೆಂಗಿನಕಾಯಿ ಅಥವಾ ಹಣ್ಣು..!
ಉಪಯುಕ್ತ ಮಾಹಿತಿ ಇದೆ ಓದಿ
"ವೀಳ್ಯದೆಲೆ"
ಮತ್ತು ಮಹತ್ವಗಳು..
೧. ವೀಳ್ಯದೆಲೆ ತುದಿಯಲ್ಲಿ - ಲಕ್ಷ್ಮೀವಾಸ..
೨. ವೀಳ್ಯದೆಲೆ ಬಲಭಾಗದಲ್ಲಿ ಬ್ರಹ್ಮ ದೇವರ ವಾಸ..
೩. ವೀಳ್ಯದೆಲೆ ಮಧ್ಯದಲ್ಲಿ ಸರಸ್ವತೀ ದೇವಿ..
೪. ವೀಳ್ಯದೆಲೆ ಎಡಭಾಗದಲ್ಲಿ ಪಾರ್ವತೀ ದೇವಿ..
೫. ವೀಳ್ಯದೆಲೆ ಸಣ್ಣದಂಟಿನಲ್ಲಿ ಮಹಾವಿಷ್ಣುವಿನ ವಾಸ..
೬. ವೀಳ್ಯದೆಲೆ ಹಿಂಭಾಗದಲ್ಲಿ ಚಂದ್ರದೇವತೆ ವಾಸ..
೭. ವೀಳ್ಯದೆಲೆ ಎಲ್ಲಾ ಮೂಲೆಗಳಲ್ಲಿ ಪರಮೇಶ್ವರನ ವಾಸ.
೮. ವೀಳ್ಯದೆಲೆಯ ಬುಡದಲ್ಲಿ ಮೃತ್ಯುದೇವತೆಯ ವಾಸ..
(ಈ ಕಾರಣಕ್ಕೆ ತಾಂಬೂಲ ಹಾಕಿಕೊಳ್ಳುವಾಗ ತುದಿ ಭಾಗ ತೆಗೆದು ಹಾಕಿಕೊಳ್ಳುವುದು)
೯. ವೀಳ್ಯದೆಲೆ ತೊಟ್ಟಿನಲ್ಲಿ ಅಹಂಕಾರ ದೇವತೆ ಹಾಗೂ ದಾರಿದ್ರ್ಯಲಕ್ಷ್ಮೀ ಇರುತ್ತಾರೆ..
(ಆದುದರಿಂದನೇ ವೀಳ್ಯದೆಲೆ ಹಾಕಿಕೊಳ್ಳುವವರು ತೊಟ್ಟನ್ನು ಮುರಿದು ಹಾಕುತ್ತಾರೆ..,
ಅಹಂಕಾರ ಹಾಗೂ ದಾರಿದ್ರ್ಯಲಕ್ಷ್ಮೀ ಬರಬಾರದೆಂಬ ಅರ್ಥ..)
೧೦. ವೀಳ್ಯದೆಲೆ ಮಧ್ಯಭಾಗದ ನಂತರ ಮನ್ಮಥನ ವಾಸ..,
ಈ ಎಲ್ಲಾ ದೇವರುಗಳು ಇರೋದ್ರಿಂದಾನೆ, ವೀಳ್ಯದೆಲೆ ತಾಂಬೂಲಕ್ಕೆ ಇಷ್ಟು ಮಹತ್ವ..
ಪೂರ್ವ ಅಥವಾ ಉತ್ತರ ದಿಕ್ಕಿಗೆ ತುದಿ ಬರುವ ತರಹ ಇಟ್ಟು ದೇವರಿಗೆ ನೈವೇದ್ಯ ಮಾಡಬೇಕು..
ಯಾರ ಮನೆಯಲ್ಲೇ ತಾಂಬೂಲ ಕೊಟ್ಟರೂ, ದೇವರ ಮುಂದೆ ಇಟ್ಟು ನಮಸ್ಕಾರ ಮಾಡಿ, ಆ ನಂತರ ಉಪಯೋಗಿಸಬೇಕು..
ಮಂಗಳವಾರ, ಶುಕ್ರವಾರಗಳಂದು ಯಾವುದೇ ಕಾರಣಕ್ಕೂ ವೀಳ್ಯದೆಲೆ ಹೊರಗೆ ಹಾಕಬಾರದು..
ಹಸಿರಾಗಿರುವ ಮತ್ತು ಅಂದವಾಗಿ ಹಸ್ತದ ಆಕಾರ ಇರುವ ಎಳೆಯ ವೀಳ್ಯದೆಲೆ ನೈವೇದ್ಯ ಮಾಡಬೇಕು ಮತ್ತು ತಾಂಬೂಲ ಕೊಡಬೇಕು..
"ತಾಂಬೂಲ ಕೊಡೋವಾಗ ಎಚ್ಚರಿಕೆ ಇರಲಿ...!
೧. ವೀಳ್ಯದೆಲೆ ತಾಂಬೂಲ ಕೊಡೊವಾಗ, ವೀಳ್ಯದೆಲೆ ಆಗಿ ಹೋಗಿದೆ, ಏನು ಅಂದುಕೊಳ್ಳಬೇಡಿ ಅಂಥ ಬರೀ ಹಣ್ಣು ಅಥವಾ ತೆಂಗಿನಕಾಯಿ ಕೊಟ್ಟರೆ.....
"ನೀವು ಮಾಡುವ ಕಾರ್ಯಗಳಿಗೆ ತುಂಬಾ ಅಡಚಣೆ ಉಂಟಾಗುತ್ತದೆ ..
ಶುಭಕಾರ್ಯಗಳಾದರೆ ತುಂಬಾ ತೊಂದರೆಗಳಾಗುತ್ತವೆ, ಜನಸಹಾಯ ದೊರೆಯುವುದಿಲ್ಲ ..ಹಣಕಾಸಿಗೆ ಪರದಾಟವಾಗುತ್ತದೆ...
೨. ನೀವು ಕೊಡುವ ತಾಂಬೂಲದ ವೀಳ್ಯದೆಲೆ ಒಣಗಿದ್ದರೆ...
ಅತಿಯಾದ ನಷ್ಟ, ಅನಾರೋಗ್ಯವಾಗುತ್ತದೆ.., ನಿಮ್ಮ ಕಾರ್ಯಗಳು ಅರ್ಧಕ್ಕೇ ನಿಂತು ಹೋಗುತ್ತವೆ ...
೩. ಯಾರಾದರೂ ಕೊಟ್ಟ ತಾಂಬೂಲವನ್ನು ದೇವರಿಗೆ ಸಮರ್ಪಿಸದೇ, ಯಾವುದೋ ಮೂಲೆಯಲ್ಲಿ ಇಟ್ಟುಬಿಟ್ಟರೆ, ಸಮಾಜದಲ್ಲಿ, ಬಂಧುಗಳಲ್ಲಿ ಗೌರವ ಕಳೆದುಕೊಳ್ಳುತ್ತಾರೆ, ಮಕ್ಕಳಿಗೆ ಮರೆವಿನ ರೋಗ ಬರುತ್ತದೆ...
೪. ಯಾರಾದರೂ ತಾಂಬೂಲ ಕೊಟ್ಟಾಗ ಮನೆಗೆ ತರದೆ ಎಲ್ಲಿಯಾದರೂ ಬಿಟ್ಟು ಬಂದರೆ..."ನಿಮ್ಮ ಕಾರ್ಯಗಳು ತುಂಬಾ ನಿಧಾನವಾಗುತ್ತದೆ, ವಿವಾಹ ಕಾರ್ಯಗಳಿಗೆ ಅಡಚಣೆಯಾಗುತ್ತದೆ.., ಶುಭ ಕಾರ್ಯ ನಿಧಾನವಾಗುತ್ತದೆ...
ಮಕ್ಕಳ ಮಾನಸಿಕ ಬೆಳವಣಿಕೆ ಕಮ್ಮಿಯಾಗುತ್ತದೆ...
೫. ತಾಂಬೂಲ ಕೆಳಗೆ ಬಿದ್ದರೆ ನಿಮ್ಮ ಕೆಲಸಗಳು ಇನ್ನೇನು ಆಯಿತು ಅನ್ನೋ ಸಮಯದಲ್ಲಿ ಅರ್ಧಕ್ಕೇ ನಿಂತುಹೋಗುತ್ತದೆ ...
೬. ತಾಂಬೂಲ ಕೊಡೊವಾಗ ವೀಳ್ಯದೆಲೆ ಅಡಿಕೆ ಕೊಳೆತಿದ್ದರೆ, ದರಿದ್ರರಾಗುತ್ತೀರಿ, ಸಾಲದ ಸಮಸ್ಯೆ ಜಾಸ್ತಿಯಾಗುತ್ತದೆ. .ಯಾರ ಮನೆಯಲ್ಲಿ ತಾಂಬೂಲ ಕೊಟ್ಟರೂ ಮೊದಲು ತಂದು ದೇವರ ಮುಂದೆ ಇಟ್ಟು ನಮಸ್ಕರಿಸಿ, ಆನಂತರ ಸರಿಯಾದ ರೀತಿಯಲ್ಲಿ ಉಪಯೋಗಿಸಿ....ಶುಭವಾಗಲಿ..
ಕಲಶದ ವೀಳ್ಯದೆಲೆ ಮತ್ತು ವಿಶೇಷಗಳು
"ಕಲಶದ ವೀಳ್ಯದೆಲೆ"ಯನ್ನು, ಪೂಜೆಯ ನಂತರ ಏನು ಮಾಡಬೇಕು?
ಕಲಶದ ವೀಳ್ಯದೆಲೆಯನ್ನು ಪ್ರಸಾದ ರೂಪವಾಗಿ ಮನೆಯ ಹಿರಿಯರು ಮಾತ್ರ ಹಾಕಿಕೊಳ್ಳಬೇಕು. ಬೇರೆಯವರು ಹಾಕಿಕೊಳ್ಳಬಾರದು. ಮಗಳು ಅಳಿಯ ಇದ್ದರೆ ಹಾಕಿಕೊಳ್ಳಬಹುದು.
ಕಲಶದ ವೀಳ್ಯದೆಲೆಯನ್ನು ಒಣಗಿಸಿದರೆ , ಅಥವಾ ಕಸದಲ್ಲಿ ಗುಡಿಸಿದರೆ ?
ಆ ಮನೆಗೆ ದಾರಿದ್ರ್ಯ ಬಂದು ಬಿಡುತ್ತದೆ. ಕಲಶದೇವಿಯ ಶಾಪವಾಗಿ ಆ ಮನೆಯಲ್ಲಿ ಸಂಪಾದಿಸಿದ ಹಣ ಬೇರೆಯವರ ಪಾಲಾಗಿ, ತುಂಬಾ ಕಷ್ಟದ ಜೀವನ ಮಾಡುತ್ತೀರಿ.
ಸಾಲದಭಾದೆ ಇಂದ ನರಳುವಿರಿ. ಶತೃಭಾಧೆ ಜಾಸ್ತಿಯಾಗುತ್ತದೆ.
ಪೂಜಿಸಿದ ಕಲಶದ ವೀಳ್ಯದೆಲೆಯನ್ನು ತುಳಸೀ ಕಟ್ಟೆಗೆ ಹಾಕಿದರೆ?
ಅವರು ಮಾಡಿದ ಪಾಪಗಳೆಲ್ಲವೂ ನಿವಾರಣೆಯಾಗುತ್ತದೆ. ಬಹಳ ತೇಜೋವಂತರೂ ಕಾಂತಿವಂತರೂ ಆಗಿ, ನೆಮ್ಮದಿಯ ಜೀವನ ಮಾಡುತ್ತಾರೆ. ಸರ್ವ ತೀರ್ಥಗಳೂ ತುಳಸಿಯಲ್ಲಿ ಇರುವುದರಿಂದ ಸರ್ವ ಶ್ರೇಷ್ಠ.
ಕಲಶದ ವೀಳ್ಯದೆಲೆಯನ್ನು ಪೂಜ್ಯ ಭಾವನೆಯಿಂದ, ಕುಲದೇವತಾ ಸ್ಮರಣೆ ಮಾಡಿ, ಹರಿಯುವ ನದಿಯಲ್ಲಿ ಬಿಟ್ಟರೆ?
ಪೂಜಿಸಿದ ದೇವರು, ಕಲಶದ ದೇವರು, ಕುಲದೇವರ ಆಶೀರ್ವಾದ ಎಂದೆಂದೂ ಇದ್ದು ಇಷ್ಟಾರ್ಥ ಸಿದ್ಧಿಯಾಗುತ್ತದೆ. ನೆನೆದ ಕಾರ್ಯಗಳು ಬಹಳ ಬೇಗ ಈಡೇರುತ್ತವೆ.
ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ಇದ್ದು ಎಲ್ಲರೂ ಆರೋಗ್ಯವಂತರಾಗಿರುತ್ತಾರೆ.
ಕಲಶಕ್ಕೆ ಬಿಳೀ ವೀಳ್ಯದೆಲೆ ಇಟ್ಟರೆ ?
ಸ್ತ್ರೀ ದೋಷ ಮತ್ತು ಶಾಪ ಉಂಟಾಗುತ್ತದೆ. ದಟ್ಟದಾರಿದ್ಯ ಅನುಭವಿಸುತ್ತಿರಿ.
ಕಲಶಕ್ಕೆ ಇಡೋ ವೀಳ್ಯದೆಲೆ ಹಸಿರು ಬಣ್ಣದ್ದಾಗಿರಬೇಕು. ಎಳೆಯ ವೀಳ್ಯದೆಲೆ ಆಗಿರಬೇಕು. ಹಸ್ತದ ಆಕಾರ ಇರಬೇಕು. ಭಿನ್ನವಾಗಿರಬಾರದು..
ವೀಳ್ಯದೆಲೆ ಹಾರವನ್ನು "ದುರ್ಗಾದೇವಿ"ಗೆ ಹಾಕಿ ಪೂಜೆ ಮಾಡಿಸಿದರೆ ಫಲ ಏನು..?
ಯಾರು ಒಬ್ಬೊಬ್ಬರೇ ಇರುವಾಗ ತುಂಬಾ ಭಯಪಡುತ್ತಾರೆಯೋ.
ಒಬ್ಬರೇ ಮಾತಾನಾಡಿಕೊಳ್ಳುತ್ತಾರೋ ಅಥವಾ ಒಬ್ಬರೇ ನಗುತ್ತಿರುತ್ತಾರೋ..
ಸಾರ್ವಜನಿಕರಲ್ಲಿ ಮಾತನಾಡುವಾಗ ಭಯವಾದರೆ
ಮಾತನಾಡುವಾಗ ತೊದಲುತ್ತಿದ್ದರೆ.
ಒಬ್ಬರೇ ಒಂಟಿಯಾಗಿ ಕುಳಿತು ತುಂಬಾ ಯೋಚನೆ ಮಾಡೋದು, ಮನಸ್ಸಿನೊಳಗೆ ತುಂಬಾ ದುಃಖ ಪಡೋದು ಆಗುತ್ತಿದ್ದರೆ.
ಎಲ್ಲರೂ ಇದ್ದು ಯಾರೂ ಇಲ್ಲ ಅನ್ನೋ ಒಂಟಿ ಭಾವನೆ ಬರುತ್ತಿದ್ದರೆ.
ಜೀವನ ಸಾಕು ಸತ್ತೋಗಿಬಿಡೋಣ ಅನ್ನಿಸುತ್ತಿದ್ದರೆ.
ಇಂಥವರು, "ಶ್ರೀ ದುರ್ಗಾದೇವಿಗೆ" 7 ಮಂಗಳವಾರ "ವೀಳ್ಯದೆಲೆ "ಹಾರ ಹಾಕಿಸಿ, ಪ್ರಾರ್ಥನೆ ಮಾಡಿ, ಫಲ ಹಾಗೂ ತಾಂಬೂಲವನ್ನು ನೈವೇದ್ಯ ಮಾಡಿಸಿ, ಸುಮಂಗಲಿಯರಿಗೆ ತಾಂಬೂಲ ದಾನ ಮಾಡಿದರೆ , ಸರ್ವ ದೋಷಗಳು ನಿವಾರಣೆಯಾಗುತ್ತದೆ. ದುರ್ಗಾದೆವಿಗೆ ವೀಳ್ಯದೆಲೆ ಹಾರ ತುಂಬಾ ವಿಶೇಷವಾಗಿರುತ್ತದೆ..
ಯಾರ ಬುದ್ಧಿಯು ಮಂಕಾದರೆ
ಜ್ಞಾಪಕ ಶಕ್ತಿ, ಬುದ್ಧಿಶಕ್ತಿ ಕಡಿಮೆಯಾದರೆ
ತಲೆಯಲ್ಲಿ ನೀರು ತುಂಬಿದ್ದರೆ
ಬಾಣಂತಿಯರಲ್ಲಿ ಸನ್ನಿಯಾದರೆ
ದೇಹದಲ್ಲಿ ನೀರಿನ ಅಂಶ ಕಡಿಮೆಯಾದರೆ
ದೇಹದಲ್ಲಿ ಬಿಳಿ ರಕ್ತಕಣಗಳು ಕಡಿಮೆಯಾದರೆ
ಕಣ್ಣಿನಲ್ಲಿ ನೀರು ಬರುತ್ತಿದ್ದರೆ
ದೇಹದಲ್ಲಿ fluid ಕಡಿಮೆಯಾದರೆ
ನಾಲಿಗೆ ಯಾವಾಗಲೂ ಒಣಗುತ್ತಿದ್ದರೆ
ಈ ತರಹ ದೋಷವುಳ್ಳವರು "ಶ್ರೀದುರ್ಗಾ" ದೇವಿಗೆ 9 ಮಂಗಳವಾರ ದೇವಿಗೆ "ವೀಳ್ಯದೆಲೆ" ಹಾರ ಹಾಕಿಸಿ, ಪೂಜಿಸಿ ತಾಂಬೂಲ ದಾನ ಮಾಡುತ್ತಾ ಬಂದರೆ
ಸರ್ವದೋಷ ನಿವಾರಣೆಯಾಗುತ್ತದೆ. ಆರೋಗ್ಯಭಾಗ್ಯ ಉಂಟಾಗುತ್ತದೆ ..
ಯಾವುದೇ ತರಹದ "ಶ್ರೇಯಸ್ಸಿಗಾಗಿ ದೇವಿಗೆ ಬೆಳಗ್ಗೆ "ವೀಳ್ಯದೆಲೆ " ಹಾರ ಹಾಕಿಸಿ. ಯಾವುದೇ ತರಹದ ಖಾಯಿಲೆಯಿಂದ ಗುಣವಾಗಬೇಕಾದರೆ, "ಸಾಯಂಕಾಲ" ವೀಳ್ಯದೆಲೆ ಹಾರ ಹಾಕಬೇಕು..
(22, 24, 48, 108 ,109 ಎಲೆಗಳಿದ್ದರೆ ತುಂಬಾ ಒಳ್ಳೆಯದು, ಜೋಡಿ ಇರಬೇಕು. ಆಗದಿದ್ದರೆ 5 , 7, 9, 11 ಎಲೆಗಳ ಹಾರ ಬೇಕಾದರೂ ಹಾಕಬಹುದು)
x
No comments:
Post a Comment
If you have any doubts. please let me know...