ಜನವರಿ 9, 2026

ಅಷ್ಟಾಂಗ ತೀರ್ಥ

    ಆದ್ಯಂ ಕಾಯವಿಶುದ್ಧ್ಯರ್ಥಂ ದ್ವಿತೀಯಂ ಧರ್ಮಸಾಧನಮ್ |
    ತೃತೀಯಂ ಮೋಕ್ಷದಂ ಪ್ರೋಕ್ತಮೇವಂ ತೀರ್ಥ೦ ತ್ರಿಧಾಪಿಬೇತ್ ||

[ಮೊದಲನೆಯದು ಶರೀರಶುದ್ಧಿಗೆ, 
ಎರಡನೆಯದು ಧರ್ಮಸಾಧನೆಗೆ, 
ಮೂರನೆಯದು ಮೋಕ್ಷ ಪಡೆಯಲು - ಹೀಗೆ ಮೂರು ಬಾರಿ ತೀರ್ಥಪ್ರಾಶನ ಮಾಡಬೇಕು.]

ಇಂತಹ ಪವಿತ್ರವಾದ ತೀರ್ಥಕ್ಕೆ 'ಅಷ್ಟಾಂಗತೀರ್ಥ'ವೆನ್ನುತ್ತಾರೆ. 

ಶಿಲಾ ತಾಮ್ರಂ ತಥಾ ತೋಯಂ ಶಂಖ: ಪುರುಷಸೂಕ್ತಮ್ | 
ಗಂಧೋ ಘಂಟಾ ಚ ತುಲಸೀತ್ಯಷ್ಟಾಂಗಂ ತೀರ್ಥಮುಚ್ಯತೇ ॥

ಶಾಲಿಗ್ರಾಮ, ತಾಮ್ರ ಪಾತ್ರ, ಶಂಖದಲ್ಲಿಟ್ಟ ಸ್ವಚ್ಛ ನೀರು, ಪುರುಷ ಸೂಕ್ತ ಮಂತ್ರದ ಪಾಠ, ಗಂಧ, ಘಂಟಾನಾದ ಮತ್ತು ತುಲಸಿ ಇವುಗಳಿಂದ ಸಿದ್ಧವಾದುದೇ “ಅಷ್ಟಾಂಗತೀರ್ಥವು

ದೇವಸ್ಥಾನದಲ್ಲಿ ತೀರ್ಥ ಸೇವನೆ ಮಾಡುವ ಕ್ರಮ

1. ತೀರ್ಥವನ್ನು ಬಲಗೈಯಲ್ಲಿಯೇ ಸ್ವೀಕರಿಸಬೇಕೆಂಬುದು ನಿಯಮ.

2. ಕೈಕೆಳಗೆ ವಸ್ತ್ರವೊಂದನ್ನು ಇಲ್ಲವೇ ಉತ್ತರೀಯವನ್ನು, (ಸ್ತ್ರೀಯರು ತಮ್ಮ ಸೀರೆಯ ಸೆರಗಿನ ತುದಿಯನ್ನು) ಹಿಡಿದಿರಬೇಕು. ಇದರ ಉದ್ದೇಶವೇನೆಂದರೆ, ಸ್ವೀಕರಿಸುವಾಗ ಅಥವಾ ಪ್ರಾಶನ ಮಾಡುವಾಗ ತೀರ್ಥವು ಕೆಳಗೆ ಬೀಳದಂತೆ ಎಚ್ಚರ ವಹಿಸುವುದಾಗಿದೆ. 

2. ತೀರ್ಥವನ್ನು ಸ್ವೀಕರಿಸುವಾಗ ನಮ್ಮ ತೋರುಬೆರಳನ್ನು ಹೆಬ್ಬೆರಳಿನ ಅಂತಿಮ ರೇಖೆಗೆ ಮುಟ್ಟುವಂತೆ ಮಡಿಸಿ ಅದರ ಮೇಲೆ ಹೆಬ್ಬೆರಳನ್ನು ಮಡಿಚಿಡಬೇಕು. ಉಳಿದ ಮೂರು ಬೆರಳುಗಳಲ್ಲಿ ಮಧ್ಯದ ಬೆರಳು ಮೇಲಿರುವಂತೆ, ನಂತರ ಉಂಗುರದ ಬೆರಳು ಮತ್ತು ಕೊನೆಯಲ್ಲಿ ಕಿರುಬೆರಳಿರುವಂತೆ ನೇರವಾಗಿ ಚಾಚಿರಬೇಕು. 

4. ಪ್ರಪ್ರಥಮವಾಗಿ ತೀರ್ಥವನ್ನು ತಲೆಯಮೇಲೆ ಪ್ರೋಕ್ಷಿಸಿಕೊಳ್ಳಬೇಕು. 

5. ಮುಂಜಾನೆ ಸಂಧ್ಯಾವಂದನೆ ;ದೇವರಪೊಜೆ ನಂತರ ಆಹಾರ ಸೇವನೆಗೂ ಮೊದಲು ಮೂರೂ ಸಲ ತೀರ್ಥವನ್ನು ಸ್ವೀಕರಿಸಬೇಕು.(ಸಾತ್ವಿಕ ಆಹಾರ ಇದ್ದಲ್ಲಿ ಅಡ್ಡಿ ಇಲ್ಲ )

6. ಮಹಾಪೂಜೆ ಯಲ್ಲೂ ಸಹ ಊಟದ ಮೊದಲು ಮೂರೂ ಸಲ ತೀರ್ಥವನ್ನು ಸ್ವೀಕರಿಸಬೇಕು. ಏಕಾದಶಿಯಂದು ಒಂದೇ ಸಲ ತೀರ್ಥ ಪ್ರಾಶನ ಮಾಡಬೇಕು)

7. ತೀರ್ಥಗಳನ್ನು ಪ್ರಾಶನ ಮಾಡಿದ ನಂತರ ಕೈಯಲ್ಲಿ ಉಳಿದಿರುವ ತೇವಾಂಶವೂ ನಷ್ಟವಾಗದಂತೆ ನೆತ್ತಿಯ ಮೇಲೆ ಸವರಿಕೊಳ್ಳಬೇಕು, ಇಲ್ಲವಾದರೆ ಕೈಗಳ ಕೆಳಗೆ ಹಿಡಿದಿದ್ದ ವಸ್ತ್ರದಿಂದ ಅದನ್ನು ಒತ್ತಿಕೊಂಡು ಒರೆಸಿಕೊಳ್ಳಬೇಕು. 

8. ತೀರ್ಥವನ್ನು ಸ್ವೀಕರಿಸುವಾಗ ದೇಹವನ್ನು ಬಗ್ಗಿಸಿರಬೇಕು. ಇದು ದೇವರ ಅಭೀಷೇಕದ ತೀರ್ಥಕ್ಕೆ ನಾವು ನೀಡುವ ಗೌರವ ಮತ್ತು ತೋರುವ ಭಕ್ತಿಯ ಸಂಕೇತವಾಗಿರುತ್ತದೆ. 

9. ಮೂರು ತೀರ್ಥಗಳ ಸಾಂಕೇತಿಕ ವಿವರಣೆ: 
ಪ್ರಥಮಂ ಕಾಯಶುದ್ಧ್ಯರ್ಥಂ
ದ್ವಿತೀಯಂ ಧರ್ಮಸಾಧನಂ 
ತೃತೀಯಂ ಮೋಕ್ಷಸಿದ್ಧ್ಯರ್ಥಂ 
ಏವಂ ತೀರ್ಥಂ ಪಿಬೇತ್||
ಅರ್ಥ: ಮೊದಲನೆಯದು ಕಾಯ ಅಥವಾ ದೇಹ ಶುದ್ಧಿಗಾಗಿ; ಎರಡನೆಯದು ಧರ್ಮಸಾಧನೆಗಾಗಿ ಮತ್ತು ಮೂರನೆಯದು ಮೋಕ್ಷಸಿದ್ಧಿಗಾಗಿ ಈ ತೀರ್ಥಗಳನ್ನು ಕುಡಿಯಬೇಕು. 
ಕೆಲವೆಡೆ ಒಂದೇ ಬಾರಿ ತೀರ್ಥವನ್ನು ನೀಡುವರಾದರೂ ಒಂದರಲ್ಲೇ ಮೂರು ತೀರ್ಥಗಳನ್ನು ಅನುಸಂಧಾನಿಸಿ ಕುಡಿಯಬೇಕು. 

10. ತೀರ್ಥ ಸೇವನೆ ಸಮಯದಲ್ಲಿ ಹೇಳುವ ಮಂತ್ರ* :

ಅಕಾಲ ಮೃತ್ಯು ಹರಣಂ ಸರ್ವವ್ಯಾಧಿ ನಿವಾರಣಂl
ಸರ್ವ ದುರಿತೋಪಶಮನಂ ವಿಷ್ಣು ಪಾದೋದಕಂ ಶುಭಂll

ಶರೀರೆ ಜರ್ಜರೀ ಭೂತೆ ವ್ಯಾಧಿಗ್ರಸ್ತೇ ಕಳೇವರೇl
ಔಷಧಂ ಜಾಹ್ನವಿ ತೋಯಂ ವೈದ್ಯೋ ನಾರಾಯಣೋ ಹರೀಃll
ಸಂಗ್ರಹ 
ಪ್ರಶಾಂತ ಭಟ್

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

If you have any doubts. please let me know...